ಹಿರಿಯರಿಗೆ ಬಾಲ್ಯದ ದಿನಗಳನ್ನು ನೆನೆಯುವ ದಿನ. ಸ್ಫೂರ್ತಿ ನ್ಯೂಸ್ ಚಡಚಣ. ಜವಹಾರಲಾಲ್ ನೆಹರೂ ಅವರ ಜನ್ಮ ದಿನದಂದು ಆಚರಿಸುವ ಮಕ್ಕಳ ದಿನಾಚರಣೆ ಹಿರಿಯರಿಗೆ ಬಾಲ್ಯದ ದಿನಗಳನ್ನು ನೆನೆಯುವ ದಿನ, ಮಕ್ಕಳಿಗೆ ನೆಹರೂ ಅವರನ್ನು ನೆನೆಯುತ್ತಾ ಆನಂದಿಸುವ ದಿನ, ಶಿಕ್ಷರಿಗೆ ಮಕ್ಕಕನ್ನು ಆನಂದವನ್ನು ಸವಿದು ಮೆಲಕು ಹಾಕುವ ದಿನವಾಗಿದೆ ಎಂದು ಫಾರ್ಮಸಿ ಕಾಲೇಜಿನ ಉಪನ್ಯಾಸಕಿ ನೀಲಾಂಬರಿ ಖಾನಾಪುರ ಹೇಳಿದರು. ಪಟ್ಟಣದ ಓಂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಮಕ್ಕಳ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಮುಖ್ಯ ಶಿಕ್ಷಕ ಸುರೇಶ ಜಂತಿ ಮಾತನಾಡಿ, ಪ್ರತಿ ಮಗುವು ಮುಗ್ಧತೆ, ಕ್ಷಮಾಗುಣ, ಸ್ನೇಹ, ಕಾಳಜಿ, ಕ್ರಿಯಾಶೀಲತೆ ಮತ್ತು ಅಪರಿಮಿತ ಪ್ರೀತಿಯ ಪ್ರತೀಕವಾಗಿರುತ್ತಾರೆ. ಒಂದು ಮಗು ಕನಸು ಕಂಡರೆ ಅದರಿಂದಾಗಿ ಇಡೀ ರಾಜ್ಯವು ಪ್ರಗತಿ ಕಾಣುತ್ತದೆ ಹಾಗಾಗಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಮನಸ್ಸಿನಲ್ಲಿ ಒಳ್ಳೆಯ ಭಾವನೆಗಳನ್ನು ಬಿತ್ತಬೇಕು, ಭವಿಷ್ಯದ ಬಗ್ಗೆ ಕನಸುನ್ನು ಕಾಣುವಂತೆ ಪೋತ್ಸಹಿಸಬೇಕು ಎಂದರು. ಪುಟಾಣಿಗಳು ನೃತ್ಯ, ಸಂಗೀತ, ನಾಟಕ, ಆಟ ಎಂದೆಲ್ಲಾ ತಮ್ಮ ಪ್ರತಿಭೆಗಳನ್ನು ಪ್ರದರ್ಶನ ಮಾಡಿ ಸಂತೋಷ ಪಟ್ಟರು. ಕಾರ್ಯಮದಲ್ಲಿ ಶಿಕ್ಷಕರಾದ ಪಿ ಎಚ್ ಪೂಜಾರಿ, ಎಮ್ ಎನ್ ಚವ್ಹಾಣ, ಎ ಎಸ್ ಜೇವೂರ, ಎ ಎಸ್ ದುಮ್ಮಾ, ಎಸ್ ಎಸ್ ಮಾಲಾಪುರ, ಬಿ ಎಸ್ ಮಡ್ಡಿ, ಎಸ್ ಡಿ ಬಣಗಾರ ಹಾಗೂ ವಿದ್ಯಾರ್ಥಿಗಳು ಇದ್ದರು
ಸ್ಫೂರ್ತಿ ನ್ಯೂಸ್ ಚಡಚಣ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಅನೌಪಚಾರಿಕವಾಗಿ ಹೆಚ್ಚಿಸುವಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪಾತ್ರ ಮಹತ್ವದ್ದು ಎಂದು ಶಿಕ್ಷಣ ಸಂಯೋಜಕರ ಶ್ರೀಶೈಲ ಚನಗೊಂಡ ಹೇಳಿದರು. ಝಳಕಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರೌಢ ಶಾಲೆಯಲ್ಲಿ ನಡೆದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವಿಜಯಪುರ ಅವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ಅಮೃತ ಮಹೋತ್ಸವ ರಸಪ್ರಶ್ನೆ ಕಾರ್ಯಕ್ರಮದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷರಾದ ಜಿ ಎಸ್ ಕಾಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿ ಕೆ ಜೆ ವ್ಹಿ ಎಸ್ ನಡೆದು ಬಂದ ದಾರಿ ಕುರಿತು ಹೇಳಿದರು. ಸರಕಾರಿ ಪ್ರೌಢ ಶಾಲೆ ಝಳಕಿ ಮುಖ್ಯ ಶಿಕ್ಷಕ ಶಿವಾಜಿ ನಾಗಣಿ ಮಾತನಾಡಿ, ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಹೆಚ್ಚು ಹೆಚ್ಚು ಸಂಘಟನೆ ಮಾಡಿ ವಿಜ್ಞಾನವನ್ನು ಸರಳವಾಗಿ ಕಲಿಯಲು ಅನುಕೂಲವಾಗಲಿದೆ ಎಂದರು. ಜಿಲ್ಲಾ ಸಮನ್ವಯಾಧಿಕಾರಿ ಶ್ರೀದೇವಿ ಪಾಟೀಲ ಜಿಲ್ಲಾ ಮಟ್ಟದ ಆನ್ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡ ಬಗ್ಗೆ ವಿವರಿಸಿದರು. ಜಿಲ್ಲಾ ಕಾರ್ಯದರ್ಶಿ ರಮೇಶ ನಾಯಕ ಅವರುಪ್ರಥಮ. ಶೌರ್ಯ ರಾಜೇಶ್ ಕಟ್ಟಿ.ಸೇಂಟ್ ಜೋಸೆಫ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿಜಯಪುರ.ದ್ವಿತೀಯ. ನವೀನ ಅವರಾದ.ಬ್ರಿಲಿಯಂಟ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ತಾಳಿಕೋಟಿ.ತೃತೀಯ. ಸಮರ್ಥ ರವಿಚಂದ್ರ ಬನಸೋಡೆ.ಶ್ರೀ ಸಂಗಮೇಶ್ವರ...