Skip to main content

ಕೇಂದ್ರ ಸರಕಾರ ಹುದ್ದೆಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಖಂಡಿಸಿ ತಹಸೀಲ್ದಾರ್ ಗೆ ಮನವಿ.


ಸ್ಫೂರ್ತಿ ನ್ಯೂಸ್ ಚಡಚಣ.

ಕೇಂದ್ರ ಸರ್ಕಾರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆಗುತ್ತಿರುವ ಬಿ ಮತ್ತು ಸಿ ದರ್ಜೆ ನೌಕರರ ನೇಮಕಾತಿಯಲ್ಲಿ ಕನ್ನಡಿಗರ ಆದ ಅನ್ಯಾಯ ಖಂಡಿಸಿ ತಹಶೀಲ್ದಾರ್ ಹನಮಂತ ಶಿರಹಟ್ಟಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಹಾಗೂ ಪ್ರಧಾನ ಮಂತ್ರಿಗಳಿಗೆ  
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮನವಿ ಮಂಗಳವಾರ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಕರವೇ ಮುಖಂಡ ಮಹಾದೇವ ಬನಸೋಡೆ ಮಾತನಾಡಿ, ಕೇಂದ್ರ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಖಾಲಿಯಿರುವ 20,000ಕ್ಕೂ ಹೆಚ್ಚಿನ ’ಬಿ’ ಮತ್ತು ’ಸಿ’ ದರ್ಜೆಯ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಸದರಿ ನೇಮಕಾತಿಯ ಅರ್ಜಿ ಸಲ್ಲಿಸುವಿಕೆಯಿಂದ ಹಿಡಿದು ಎಲ್ಲಾ ಹಂತಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ತನಕ ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಡೆಯಲಿವೆ. ಇದು ಕನ್ನಡಿಗರ ಉದ್ಯೋಗಾವಕಾಶಗಳನ್ನು ಕಸಿಯುವಂಥಾ ತಾರತಮ್ಯದ ನಡೆಯಾಗಿದೆ. ನೇಮಕಾತಿಯ ಎಲ್ಲಾ ಹಂತದ ಪರೀಕ್ಷೆಗಳೂ ಹಿಂದೀ/ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ನಡೆಸುವುದು ಕನ್ನಡಕ್ಕೆ ಮಾಡಿದ ಅನ್ಯಾಯ.  ಪರೀಕ್ಷೆಗಳು ಕನ್ನಡದಲ್ಲಿ ನಡೆಯಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತraದ ಶಕೀಲ ಖಾಟಿಕ, ಶೂಕುರ ಕೊರ್ತಿ, ಹುಮಾ ಯನ ಪಟೇಲ, ಅಖಿಲ ಅರ್ಜುನಗಿ, ಜಿಲಾನಿ ವಾಲಿಕಾರ, ಜಟ್ಟೆಪ್ಪ ಬನಸೋಡೆ, ಸಂದೇಶ ಬನಸೋಡೆ, ಸುಭಾಸ ಬನಸೋಡೆ, ಈರಣ್ಣ ಪಾಟೀಲ ಇದ್ದರು.

Comments

Popular posts from this blog

ರಮೇಶ ನಾಯಕ ಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.

ಸ್ಫೂರ್ತಿ ನ್ಯೂಸ್ಚ ಚಡಚಣ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗಬಾವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ  ಗ್ರಾಮದ ಭೀಮಾಶಂಕರಲಿಂಗ ಪ್ರೌಢಶಾಲೆ ಮುಖ್ಯ ಶಿಕ್ಷಕ  ರಮೇಶ  ನಾಯಕ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ವಿಶ್ವ ಕನ್ನಡ ಬಳಗದ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವಂಬರ್ 1 ರಂದು ಹುಬ್ಬಳ್ಳಿಯ ಜಯಚಾಮರಾಜ ನಗರದ ಮಹಿಳಾ ಕಾಲೇಜು ಎದುರಿಗೆ ಅಕ್ಕನ ಬಳಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ  ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ರಮೇಶ ನಾಯಕ ಅವರಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ ಎಸ್ ಕಾಂಬಳೆ ವಿಜಯಪುರ ಹಾಗೂ ಚಡಚಣ ತಾಲೂಕ ಸಮಿತಿಯ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.